ತುಮಕೂರು : ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಮಾತ್ರ ಸೀಮಿತಗೊಳ್ಳದೆ ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸಹಕಾರ ಸಂಘಗಳ ಉಪನಿಬಂಧಕ ಆರ್. ಲೋಕೇಶ್ ಅವರು ಅಭಿಪ್ರಾಯಪಟ್ಟರು. ಅವರು ತುಮಕೂರು ನಗರದ ಎಸ್.ಎಸ್. ಪುರಂನಲ್ಲಿರುವ ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಭಾ ಆರ್ಥೋಕೇರ್ ಮತ್ತು ಜಾನ್ಸನ್ ಕಂಪನಿಯ ಸಹಯೋಗದಲ್ಲಿ ಸಂಘದ ಸದಸ್ಯರಿಗೆ ಏರ್ಪಡಿಸಿದ್ದ ಉಚಿತ ಮೂಳೆ ಸವೆತ ಮತ್ತು ಸಾಂದ್ರತೆ ತಪಾಸಣಾ ಹಾಗೂ ಸಲಹಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಹಕಾರ [...]
February 24th, 2012 | Posted in ತುಮಕೂರು | Read More »
ಬಿಜನೋರ್ ( ಉತ್ತರ ಪ್ರದೇಶ ) : ಇಲ್ಲಿ ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿರುವ ಚಲನಚಿತ್ರ ನಟಿ ನಗ್ಮಾ ಕಾಂಗ್ರೆಸ್ ಅಭ್ಯರ್ಥಿ ಒಬ್ಬ ತೋರಿಸಿದ ಅಸಭ್ಯ ವರ್ತನೆಯ ಕಾರಣ ಆಕ್ರೋಶಗೊಂಡ ಘಟನೆ ವೇದಿಕೆಯಲ್ಲಿ ನಡೆಯಿತು. ಬುಧವಾರ ಇಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹುಸೈನ್ ಅಹ್ಮದ್ ಅನ್ಸಾರಿ ಅವರು ನಗ್ಮಾ ಅವರ ಕುರಿತು ಶಾಯರಿಯೊಂದನ್ನು ಹೇಳಿದರು . ನಗ್ಮಾ ಅವರನ್ನು ಹಿಯಾಳಿಸುವಂತಿದ್ದ ಇವರ ಶಾಯರಿ ಕೇಳಿದ ನಗ್ಮಾ ಕೋಪಗೊಂಡು [...]
February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »
ಬಂಟ್ವಾಳ : ಗ್ರಾಮೀಣ ಪರವಾನಿಗೆ ಹೊಂದಿರುವ ಬಸ್ಗಳು ರಾಷ್ಟ್ರೀಯ ಹೆದ್ದಾರಿಯನ್ನು ಬಳಸದೆ ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಸಂಚರಿಸಬೇಕೆಂದು ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನೋಟೀಸು ಜಾರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಮುಸ್ತಫಾ ಯು. ಎಂಬವರು ಗ್ರಾಮೀಣ ಪರವಾನಿಗೆ ಹೊಂದಿರುವ ಖಾಸಗಿ ಹಾಗೂ ಸರಕಾರಿ ಬಸ್ಗಳು ಪಾಣೆಮಂಗಳೂರು ಪೇಟೆ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯನ್ನು ಬಳಸಿ ಸಂಚರಿಸುತ್ತಿರುವ ಬಗ್ಗೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಾದೇಶಿಕ [...]
February 24th, 2012 | Posted in ದಕ್ಷಿಣ ಕನ್ನಡ | Read More »
ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ರೈತರು ಬೆಳೆದ ಬೆಳೆಯನ್ನು ಖರೀದಿಸಲೆಂದೇ ಹಾನಗಲ್ಲನಲ್ಲಿ ತೆರೆಯಲಾಗಿರುವ ಭತ್ತದ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳು ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದು, ರೈತರು ತಂದ ಭತ್ತವನ್ನು ಜೊಳ್ಳು ಎಂದು ನಿರಾಕರಿಸಿ ಅದೇ ಭತ್ತವನ್ನು ರೈತರ ಹೆಸರಿನಲ್ಲಿ ವ್ಯಾಪಾರಿಗಳು ತಂದರೆ ಅವುಗಳನ್ನೂ ಖರೀದಿಸಿ ಅವ್ಯವಹಾರದಲ್ಲಿ ತೊಡಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷಿಸಿ, ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಹಾನಗಲ್ಲ ತಾಲೂಕಾ ಕಾಂಗ್ರೆಸ್ ಸಮಿತಿ ಗುರುವಾರ ಜಿಲ್ಲಾಧಿಕಾರಿ [...]
February 24th, 2012 | Posted in ಹಾವೇರಿ | Read More »
ಮುಂಬೈ : ಅನಾರೋಗ್ಯದ ಕಾರಣ ಕಳೆದ ಹನ್ನೆರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿಕೊಂಡರು . ಮುಂಬೈನ ಪ್ರತಿಷ್ಟಿತ ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಬ್ ಅವರಿಗೆ ಹೊಟ್ಟೆಯ ಭಾಗದಲ್ಲಿ ಎರಡು ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿತ್ತು. ಅಮಿತಾಬ್ ಬಚ್ಚನ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಸಂಜೆ ಏಳು ಘಂಟೆಗೆ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »
ಚನ್ನೈ : ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾದ ಐದು ಮಂದಿ ಆರೋಪಿಗಳನ್ನು ಇಂದು ನಸುಕಿನ ಜಾವ ಪೊಲೀಸರು ಎನ್ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ .ಗುಪ್ತಚರ ಮೂಲಗಳಿಂದ ಮಾಹಿತಿ ಪಡೆದ ಪೊಲೀಸರು ಇಂದು ನಸುಕಿನ ಜಾವ 1 ಗಂಟೆಯ ಸುಮಾರಿಗೆ ವೆಲಾಚೆರಿಯಲ್ಲಿರುವ ವಂಡಿಕರಣ್ ಸ್ಟ್ರೀಟ್ನಲ್ಲಿರುವ ಮನೆಯೊಂದನ್ನು ಸುತ್ತುವರಿದು ಅಲ್ಲಿ ಅಡಗಿದ್ದ ಆರೋಪಿಗಳನ್ನು ಹೊರಬರುವಂತೆ ತಿಳಿಸಿದರು. ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭ ಇಬ್ಬರು ಪೊಲೀಸರು ಗಾಯಗೊಂಡರು. ಇದಕ್ಕೆ ಪ್ರತಿಯಾಗಿ ಪೊಲೀಸರೂ ಕೂಡಾ [...]
February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »