|

ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಗೆ ಗುರುವಂದನಾ ಕಾರ್ಯಕ್ರಮ

ತುಮಕೂರು: ಇಂದು ಸಿದ್ಧಗಂಗಾ ಮಠದ ಡಾ. ಶ್ರೀ. ಶಿವ ಕುಮಾರ ಸ್ವಾಮೀಜಿಯವರಿಗೆ ೧೦೫ ವರ್ಷ ತುಂಬಿದ ಹಿನ್ನಲೆಯಲ್ಲಿ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮವು ಭಾರಿ ಜನಸ್ತೋಮದ ನಡುವೆ ಜರುಗುತ್ತಿದೆ. ಈ ಕಾರ್ಯಕ್ರಮಕ್ಕೆ ಯುಪಿಎ ಅಧ್ಯಕ್ಷೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದರು, ಅವರು ಗುರುವಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಆರಂಭದಲ್ಲಿ ಕನ್ನಡದಲ್ಲಿ ”ಎಲ್ಲರಿಗೂ ನಮಸ್ಕಾರ” ಅಂತ ಹೇಳಿ ಮಾತನಾಡಿದ ಸೋನಿಯಾ ಶ್ರೀಗಳ ಬಡವರ ಶಿಕ್ಷಣದ ಕಾಳಜಿ ಬಗ್ಗೆ ಮೆಚ್ಚುಗೆ ವ್ಯೆಕ್ತಪಡಿಸಿದರು. ಶ್ರೀಗಳ ಮಹತ್ವಪೂರ್ಣ ಹೆಜ್ಜೆಯ ಗುರುತನ್ನು ಅಳಿಸಲು ಸಾದ್ಯವಿಲ್ಲ ನೈತಿಕತೆಯನ್ನು ಭೋಧಿಸುವ ಶಿಕ್ಷಣದ ಅಗತ್ಯವಿದೆ ಮಠದ ಶಿಕ್ಷಣದ ಕೊಡುಗೆಗೆ ಪ್ರಶಂಸೆ ನುಡಿ, ಶ್ರಿಗಳದ್ದು ನಿಸ್ವಾರ್ಥ ಸೇವೆಯಾ ಗುಣಗಾನ ಶ್ರೀಗಳಿಗೆ ಎಲ್ಲಾ ಕಡೆ ತುಂಬಾ ಗೌರವವಿದೆ. ನಂತರ ಡಾ. ಶ್ರೀ.ಶಿವ ಕುಮಾರ ಸ್ವಾಮೀಜಿಯವರು ಮಾತನಾಡುತ್ತ ಭಾರತ ಖಂಡದಲ್ಲಿ ಶಾಂತಿ ವೃದ್ದಿಯಾಗಲಿ, ಅಸಮಾನತೆ ತೊಲಗಬೇಕು ಅದಕ್ಕೆ ಜವಾಬ್ದಾರಿಯಿಂದ ಸೇವೆ ಅಗತ್ಯತೆ ಬಗ್ಗೆ ಹೇಳಿದರು.

ಬಳಿಕ ಮಾತನಾಡಿದ ಬಾಲಗಂಗದರನಾಥ ಸ್ವಾಮೀಜಿ ಸಿದ್ಧ ಗಂಗಾ ಶ್ರೀಗಳ ಆದರ್ಶ ಹಾಗೂ ಸಿದ್ದಾಂತಗಳನ್ನು ಪಾಲಿಸಬೇಕು ಎಂದರಲ್ಲದೆ, ಭವ್ಯ ಭಾರತ ನಿರ್ಮಾಣ ಮಾಡಲು ಸೋನಿಯಾ ಗಾಂಧಿ ಸಮರ್ಥರು ಮತ್ತು ದೇಶ ಕಟ್ಟುವುದನ್ನು ತೋರಿಸಿದ್ದಾರೆ, ಮಹಿಳೆಯರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀಗಳ ಸರಳತೆಯನ್ನು ಇಷ್ಟ ಪಡುವ ಅನೇಕ ಮಂದಿ, ಸ್ವಾಮೀಜಿಯವರನ್ನು ನಡೆದಾಡುವ ದೇವರು ಅಂತ ಗೌರವಿಸುತ್ತಾರೆ. ಸೋನಿಯಾ ಭಾಷಣದ ನಡುವೆ ಮಹಿಳೆಯೊಬ್ಬಳು ಒಳ ಮೀಸಲಾತಿಗೆ ಆಗ್ರಹಿಸಿ ಕಪ್ಪು ಪಟ್ಟಿ ಪ್ರದರ್ಶನ ನಡೆಸಿದಾಗ ಪೊಲೀಸರು ವಶಕ್ಕೆ ತೆಗೆದುಕೊಂಡರು. ವೇದಿಕೆಯಲ್ಲಿ ಕೇಂದ್ರ ಸಚಿವರಾದ ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಂಡಿಸ್ ಉಪಸ್ಥಿತರಿದ್ದರು.

————– ವಿಶ್ವ ಕನ್ನಡಿಗ ನ್ಯೂಸ್ ಈಗ www.vknews.in ನಲ್ಲೂ ಲಭ್ಯ ————–

Posted by on Apr 28 2012. Filed under ತುಮಕೂರು. You can follow any responses to this entry through the RSS 2.0. Both comments and pings are currently closed.

Comments are closed

ಇತ್ತೀಚಿನ ಹೆಡ್ ಲೈನ್ಸ್

ಬೆಂಗಳೂರು ಲೈವ್ ನ್ಯೂಸ್

ಬೆಂಗಳೂರು ಲೈವ್ ನ್ಯೂಸ್

=================

ಗಮನಿಸಿರಿ

ಯಾವುದೇ ರೀತಿಯ ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳಿಗೆ ಇಲ್ಲಿ ಅವಕಾಶವಿಲ್ಲ . ದಯವಿಟ್ಟು ಅಂತಹ ಪ್ರತಿಕ್ರಿಯೆಗಳನ್ನು ಬರೆಯಬೇಡಿ .ನೀವು ಬರೆಯುವ ಕಮೆಂಟುಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ .

ಮಾಹಿತಿ ತಂತ್ರಜ್ಞಾನ ಕಾಯ್ದೆ 66 A ಪ್ರಕಾರ ಅಸಭ್ಯ , ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಕಾಮೆಂಟ್ಸ್ ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ . ಇಂತಹ ಕಾಮೆಂಟುಗಳ ಬಗ್ಗೆ ಸರ್ಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಮಾಹಿತಿ ಕೇಳಿದರೆ ಕಾಮೆಂಟ್ ಬರೆದವರ ಇ ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ .

ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ. ವಿಶ್ವ ಕನ್ನಡಿಗ ನ್ಯೂಸಿನಲ್ಲಿ ಪ್ರಕಟವಾದ ಸುದ್ದಿ ಅಥವಾ ಪ್ರತಿಕ್ರಿಯೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಪ್ರಧಾನ ಸಂಪಾದಕರನ್ನು ಸಂಪರ್ಕಿಸಿ .

E Mail : ashrafmanzarabad@gmail.com

ಅಶ್ರಫ್ ಮಂಜ್ರಾಬಾದ್
ಪ್ರಧಾನ ಸಂಪಾದಕರು
ವಿಕೆ ನ್ಯೂಸ್.

***********************************************************

ದಿನವಹಿ ಸುದ್ದಿಗಳು

Gulf Asian

Recently Commented

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

***********************************************************